ಬೆಳ್ತಂಗಡಿ: ಪುತ್ತೂರು ಅಂಚೆ ವಿಭಾಗದ ಅರ್ಧ ವಾರ್ಷಿಕ ಪಿಂಚಣಿ ಅದಾಲತ್ ಜೂ.15 ರಂದು ಪೂರ್ವಾಹ್ನ 10.00 ಗಂಟೆಗೆ ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಈ ಅದಾಲತ್ತಿನಲ್ಲಿ ಪುತ್ತೂರು ಅಂಚೆ ವಿಭಾಗದಿಂದ ನಿವೃತ್ತಿ ಹೊಂದಿ ಪಿಂಚಣಿ ಪಡೆಯುವ ಅಂಚೆ ಪಿಂಚಣಿದಾರರ ಕುಂದು ಕೊರತೆಗಳನ್ನು ಪರಿಶೀಲಿಸಲಾಗುವುದು.
ಕುಂದು ಕೊರತೆಗಳನ್ನು ಕಳುಹಿಸಲು ಇಚ್ಚಿಸುವ ಅಂಚೆ ಪಿಂಚಣಿದಾರರು ಬರಹ ಮೂಲಕ ಜೂ.12 ರ ಮೊದಲು ತಲುಪುವಂತೆ ಪುತ್ತೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು-574201 ಇವರಿಗೆ `ಪಿಂಚಣಿ ಅದಾಲತ್ನಲ್ಲಿ ವಿಚಾರಣೆಗಾಗಿ’ ಎಂಬ ಮೇಲ್ಬರಹ ಹೊಂದಿದ ಲಕೋಟೆಯಲ್ಲಿ ಕಳುಹಿಸಬಹುದು. ಜೂ.15 ರಂದು ನಡೆಯುವ ಅದಾಲತ್ನಲ್ಲಿ ಹಾಜರಿದ್ದರೆ ಸಮಕ್ಷಮ ಪರಿಶೀಲಿಸಲು ಅನುಕೂಲವಾಗುವುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.