ನಾಳ : ನಾಳ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜ.26 ರಂದು ಭೇಟಿ ನೀಡಿದರು . ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷ ವಸಂತ ಮಜಲು ಶಾಸಕರನ್ನು ಸ್ವಾಗತಿಸಿ, ಶಾಲು ಹೊದಿಸಿ ಸನ್ಮಾನಿಸಿದರು. ದೇವಸ್ಥಾನದ ಅರ್ಚಕ ರಾಘವೇಂದ್ರ ಅಸ್ರಣ್ಣ ಫಲ ಪುಷ್ಪಗಳನ್ನು ನೀಡಿ ಗೌರವಿಸಿದರು. ಈ ಸಂಧರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರು ,ಅಭಿವೃದ್ಧಿ ಅಧ್ಯಕ್ಷರು, ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.