ಉಜಿರೆ: ಇಂಜಿನಿಯರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಇಂಜಿನಿಯರ್ಸ್ ದಿನಾಚರಣೆಯನ್ನು ಸೆ15 ರಂದು ಕೃಷ್ಣಾನುಗ್ರಹ ಸಬಾಭವನ ಉಜಿರೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ಮನೋರಮ ವಹಿಸಿದ್ದರು.
ವೇದಿಕೆಯಲ್ಲಿ ಬೆಳ್ತಂಗಡಿ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪ್ರಸಾದ್, ಕಾರ್ಯದರ್ಶಿ ವಿದ್ಯಾಕುಮಾರ್,ಕೋಶಾಧಿಕಾರಿ ಸುರೇಶ್ ಬಂಗೇರ ರೋಟರಿ ಕ್ಲಬ್ ಕಾರ್ಯದರ್ಶಿ ರಕ್ಷಾ ರಾಘ್ನೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಿವೃತ್ತ ಇಂಜಿನಿಯರ್ ನಾರಾಯಣ ಭಟ್ ದಂಪತಿ, ಸೀತರಾಮ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಲಾಯಿತು.
ಶ್ರುತಿ ಕಾಂತಾಜೆ ಪ್ರಾರ್ಥಿಸಿದರು.
ಮದ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆಯಿಂದ ಉಜಿರೆಯವರೆಗೆ ವಾಹನ ಜಾಥಾ ನಡೆಯಿತು.