ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಶನ್ ಕ್ಷೇತ್ರ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನಾ ಕಾರ್ಯಕ್ರಮ

0


ಬೆಳ್ತಂಗಡಿ : ಕರ್ನಾಟಕ ರಾಜ್ಯ ಟೈಲರ್‍ಸ್ ಅಸೋಸಿಯೇಶನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಬೆಳ್ತಂಗಡಿ ಸಮಾಜ ಮಂದಿರ ಬಳಿಯ ಪಿನಾಕಿ ಸಭಾಭವನದಲ್ಲಿ ಡಿ.6 ರಂದು ಜರುಗಿತು.

ಕಾರ್ಯಕ್ರಮವನ್ನು ಇಂಧನ ಸಚಿವ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಸುನೀಲ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಿತಿ ವತಿಯಿಂದ ಸಚಿವರನ್ನು ಅಭಿನಂದಿಸಲಾಯಿತು.
ಟೈಲರ್‍ಸ್ ದಿನಾಚರಣೆಯ ಸಂದರ್ಭ ತಾಲೂಕಿನ ಟೈಲರ್‍ಸ್‌ಗಳಿಗೆ 9 ಹೊಲಿಗೆ ಮೆಷಿನ್ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಪ್ರತೀ ಗ್ರಾಮಗಳಿಗೆ ಒಂದರಂತೆ 81 ಹೊಲಿಗೆ ಯಂತ್ರ ನೀಡಿದ ಶಾಸಕ ಹರೀಶ್ ಪೂಂಜರನ್ನು ಸಮಿತಿಯಿಂದ ಅಭಿನಂದಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಬೆಳ್ತಂಗಡಿ ಕ್ಷೇತ್ರ ಸಮಿತಿಯ ಅಧ್ಯಕ್ಷೆ ವೇದಾವತಿ ವಹಿಸಿದ್ದರು. ನಿಕಟ ಪೂರ್ವಾಧ್ಯಕ್ಷ ರಾಘವ ಪುತ್ರನ್ ರವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ರಾಜ್ಯ ಅಧ್ಯಕ್ಷ ನಾರಾಯಣ ಬಿಎ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕುಮಾರ್, ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ದ.ಕ ಜಿಲ್ಲಾಧ್ಯಕ್ಷ ಜಯಂತ್ ಉರ್ಲಾಂಡಿ, ಪ್ರಧಾನ ಕಾರ್ಯದರ್ಶಿ ಲಿಗೋದರ್, ಕೋಶಾಧಿಕಾರಿ ಈಶ್ವರ್ ಕುಲಾಲ್, ಜೊತೆ ಕಾರ್ಯದರ್ಶಿ ಕುಶಾಲಪ್ಪ ಗೌಡ , ಬೆಳ್ತಂಗಡಿ ಕ್ಷೇತ್ರದ ನಿಕಟ ಪೂರ್ವ ಅಧ್ಯಕ್ಷ ರಾಘವ್ ಪುತ್ರನ್ , ಪ್ರಧಾನ ಕಾರ್ಯದರ್ಶಿ ನಾಗೇಶ್, ಕೋಶಾಧಿಕಾರಿ ಜಯ ಚಿದಾನಂದ ಉಪಸ್ಥಿತರಿದ್ದರು.

ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ 24ನೇ ವರ್ಷದ ಟೈಲರ್ಸ್ ಡೇ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಸಮಿತಿಯ ಸದಸ್ಯ ಮೋಹನ್‌ದಾಸ್ ಅಳದಂಗಡಿ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಅಧ್ಯಕ್ಷೆ ವೇದಾವತಿ ಜನಾರ್ಧನ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಕುಶಾಲಪ್ಪ ಗೌಡ ಗೇರುಕಟ್ಟೆ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here