ಪಡಂಗಡಿ: ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಪ್ರೇರೆಪಣಾ ತರಬೇತಿ

0

ಪಡಂಗಡಿ :ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪಡಂಗಡಿ ಗ್ರಾಮ ಪಂಚಾಯತಿಯ ಗರ್ಡಡಿ ಗ್ರಾಮದ ಅಂಗನವಾಡಿಯಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಪ್ರೇರೇಪಣಾ ತರಬೇತಿ ಕಾರ್ಯಕ್ರಮವನ್ನು ಫೆ.10 ರಂದು ನಡೆಯಿತು.

ಈ ತರಬೇತಿಯಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸೇರಿ ಒಟ್ಟು 32 ಮಂದಿ ಸದಸ್ಯರು ಭಾಗವಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು. ಕಾರ್ಯಕ್ರಮ ಸಂಘಟಿಸುವಲ್ಲಿ ಸಹಕರಿಸಿದರು. ಜಲಜೀವನ್ ಮಿಷನ್ ಗ್ರಾಮ್ಸ್ ಸಂಸ್ಥೆಯ ಸಿಬ್ಬಂದಿ ಪುಷ್ಪಲತಾರವರು ಕಾರ್ಯಕ್ರಮವನ್ನು ಆಯೋಜಿಸಿ ತರಬೇತಿಯನ್ನು ನೀಡಿದರು.

LEAVE A REPLY

Please enter your comment!
Please enter your name here