ವಿಜಯ ರಾಘವ ಪಡುವೆಟ್ನಾಯ ನಿಧನಕ್ಕೆ ಡಾ. ಡಿ. ಹೆಗ್ಗಡೆಯವರಿಂದ ಸಂತಾಪ

0


ಧರ್ಮಸ್ಥಳ :ಹಿರಿಯ ಸಮಾಜ ಸೇವಕ, ಕೊಡುಗೈ ದಾನಿ ಹಾಗೂ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ವಿಜಯರಾಘವ ಪಡೆಟ್ನಾಯರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿ ವಿಷಾದ ವ್ಯಕ್ತ ಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಹಾಗೂ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು, ತಾಳ್ಮೆಯನ್ನು ಕುಟುಂಬವರ್ಗದವರಿಗೂ ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸಿದ್ದಾರೆ.
ಅವರು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪ್ರೋತ್ಸಾಹಿಸುತ್ತಿದ್ದರು.ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸ್ಥಾಪಕ ಸದಸ್ಯರಾಗಿ ಅವರು ಸಕ್ರಿಯ ಸಹಕಾರ ನೀಡಿರುವುದನ್ನು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here