ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಚುನಾವಣಾ ಉಸ್ತುವಾರಿಗಳ ಸಭೆ.

0

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಏಳು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಚುನಾವಣಾ ಉಸ್ತುವಾರಿಗಳ ಸಭೆಯು ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಮಾ.31 ರಂದು ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

   ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಚುನಾವಣೆಯ ಸಿದ್ಧತೆಯ ಕುರಿತು ಮಾತನಾಡಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ ಪಕ್ಷದ ಮುಂದಿನ ಕಾರ್ಯ ಯೋಜನೆ, ಉಸ್ತುವಾರಿಗಳ ಜವಾಬ್ಧಾರಿ ಮತ್ತು ಪಕ್ಷ ಸಂಘಟಿಸುವ ಬಗ್ಗೆ ಮಾತನಾಡಿದರು. ಕ್ಷೇತ್ರ ಸಂಘಟನಾ ಕಾರ್ಯದರ್ಶಿ ನಿಸಾರ್ ಕುದ್ರಡ್ಕ ಸಮಾರೋಪ ಮಾತನ್ನಾಡಿದರು.



 ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಉಸ್ತುವಾರಿಗಳು, ಪಕ್ಷದ ಹಲವು ನಾಯಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here