ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ ವತಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಸದಸ್ಯರಿಗೆ ಊರ ದಾನಿಗಳ ನೆರವಿನಿಂದ ಸಮವಸ್ತ್ರ ವಿತರಣೆ ಕಾರ್ಯಕ್ರಮ

0

ಅಳದಂಗಡಿ:ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಸದಸ್ಯರಿಗೆ ಊರ ದಾನಿಗಳ ನೆರವಿನಿಂದ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀ ಸತ್ಯ ದೇವತೆ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ದಂತ ವೈದ್ಯ ಡಾ ಶಶಿಧರ್ ಡೋಂಗ್ರೆ, ನಿತ್ಯಾನಂದ ಶೆಟ್ಟಿ ನೊಚ್ಚ, ಭಜನಾ ಮಂಡಳಿ ಅಧ್ಯಕ್ಷ ರಘು ದೇವಾಡಿಗ, ಇಂದೂದರ ಕೋಹಿನೂರು, ಕೊರಗಪ್ಪ ಪೂಜಾರಿ ಹಾಗೂ ಭಜನಾ ಮಂಡಳಿ ಸದಸ್ಯರು ಮತ್ತು ಮಕ್ಕಳ ಪೋಷಕರು ಊರವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆ ಕೃಷ್ಣಪ್ಪ ಬಿಕ್ಕಿರ ಮಾಡಿದರು.

LEAVE A REPLY

Please enter your comment!
Please enter your name here