ಮಚ್ಚಿನ: ಮಾನ್ಯ ಸತ್ಯಚಾವಡಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

0

ಮಚ್ಚಿನ: ಮಾನ್ಯ ಸತ್ಯಚಾವಡಿ ಕೋಟ್ಯಾನ್ ಬರಿಯ ತರವಾಡು ಮನೆಯ ಗೃಹಪ್ರವೇಶ, ಧರ್ಮ ದೈವಗಳ ಪುನಃರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಕಾರ್ಯಕ್ರಮವನ್ನು ಮಡವು‌ ಬಾಲ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮೊಕ್ತೇಸರ ಮೋನಪ್ಪ ಪೂಜಾರಿ ಕಂಡೆತ್ಯಾರು ಅವರು ಮೇ.1 ರಂದು ಚಾಲನೆ ನೀಡಿದರು.

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಿಂದ ಮಾನ್ಯ ಸತ್ಯಚಾವಡಿ ತರವಾಡು ಮನೆಯವರೆಗೆ ಭವ್ಯ ಮೆರವಣಿಗೆಯ ಮೂಲಕ ನಡೆಯಿತು.

ಮೆರವಣಿಗೆಯಲ್ಲಿ ಕೀಲುಕುದುರೆ, ಚೆಂಡೆ, ಕುಣಿತ ಭಜನಾ, ಹೆಂಗಸರು ಕಲಶ ಹಿಡಿದು ,ಬ್ಯಾಂಡ್ ಕಾರ್ಯಕ್ರಮದಲ್ಲಿ ಸದಾನಂದ ಶೆಟ್ಟಿ ಮಾಡಾಪ್ಪಾಡಿ ಇನ್ನಿತರ ಗಣ್ಯರು ಹಾಜರಿದ್ದರು.

ಸಮಿತಿಯ ಪದಾಧಿಕಾರಿಗಳಾದ ಕುಟುಂಬದ ಹಿರಿಯರಾದ ಸಂಜೀವ ಪೂಜಾರಿ ಮಾನ್ಯ, ಆಡಳಿತ ಮಂಡಳಿ ಗೌರವಾಧ್ಯಕ್ಷ ದಿನಕರ ಪೂಜಾರಿ ಕಡ್ತಿಲ, ಆಡಳಿತ ಮಂಡಳಿ ಅಧ್ಯಕ್ಷ ಜನಾರ್ದನ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭೋಜ ಬಂಗೇರ ಮಾನ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಸಿ.ಹೆಚ್ ಚಿಪ್ಲುಕೋಟೆ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಪೂಜಾರಿ ಕಡ್ತಿಲ, ಕೋಶಾಧಿಕಾರಿ ಶ್ರೀಮತಿ ಪೂರ್ಣಿಮಾ ಕೋಟ್ಯಾನ್, ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ವಿನಯಚಂದ್ರ ಜೆಂಕ್ಯಾರು, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಪೂಜರಿ ಕಡ್ತಿಲ, ಮಹಾಪೋಷಕರು ಪವಿತ್ರ ಕೋಟ್ಯಾನ್ ಸಹಕರಿಸಿದರು.

LEAVE A REPLY

Please enter your comment!
Please enter your name here