ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಕಡಮ್ಮಾಜೆರವರು ಭಜನಾ ಮಂಡಳಿಯ ಅಸ್ತಿತ್ವದ ಮಾಹಿತಿಯನ್ನು ನೀಡುತ್ತಾ ವಲಯದ ಭಜನಾ ಮಂಡಳಿಯ ಬಲವರ್ಧನೆಗೆ ಮುಂದಿನ ಪೀಳಿಗೆಗೆ ಧರ್ಮದ ಸಂಸ್ಕೃತಿಯನ್ನು ತಿಳಿಸುವಲ್ಲಿ ಹೆತ್ತವರು ಪ್ರೇರಣೆ ನೀಡಿದರೆ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಯ ಯಶಸ್ವಿಗೆ ಕಾರಣವಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯುರ್ ರವರು ಭಜನಾ ಮಂಡಳಿಗಳ ದಾಖಲಾತಿಗಳನ್ನು ತಯಾರಿಸಿ ಭಜನಾ ಮಂಡಳಿಗಳ ಸಮಿತಿಗಳನ್ನು ಬಲಪಡಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಜವಾಬ್ದಾರಿ ವಹಿಸಿದರೆ ಭಜನಾ ಮಂಡಳಿಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯ ಎಂದರು. ವೇದಿಕೆಯಲ್ಲಿ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಂಯೋಜಕರಾದ ರಾಜಶೇಖರ್ ರೈ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ವಲಯದ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರು ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here