ಬೆಳಾಲು ಜ್ಞಾನ ವಿಕಾಸ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಶಿಬಿರ

0

ಬೆಳಾಲು : ಬೆಳಾಲು ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಬೆಳಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜೂ.14 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕ್ಕ ಪಿಲತ್ತಡಿ ವಹಿಸಿದ್ದರು.ಉದ್ಘಾಟನೆಯನ್ನು ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ನೆರವೇರಿಸಿ ಹುಟ್ಟು ಹಾಗೂ ದ್ಯೇಯ್ಯೋದ್ದೇಶಗಳ ತಿಳಿಸಿದರು.ಜ್ಞಾನ ವಿಕಾಸ ಸದಸ್ಯರಿಗೆ ಶಿಕ್ಷಣದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಬೆಳಾಲು ಎಸ್ ಡಿ ಎಂ ಹೈ ಸ್ಕೂಲ್ ಮುಖ್ಯ ಶಿಕ್ಷಕ ರಾಮಕ್ರಷ್ಣ ಭಟ್ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಉಜಿರೆಯ ಪೋಸ್ಟ್ ಗ್ರಾಚ್ಯುವಿಟಿ ಪ್ರಾದ್ಯಾಪಕರಾದ ಧನೇಶ್ವರಿ, ಕ್ಯಾಲಿಪೋರ್ನಿಯಾದಿಂದ ಆಗಮಿಸಿದ ಡಾ.ಸನಾರವರು menstrual cup ಬಳಕೆ ಬಗ್ಗೆ ಮಾಹಿತಿಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿಯ ಜ್ಞಾನ ವಿಕಾಸ ಯೋಜನಾಧಿಕಾರಿ ಶ್ರೀಮತಿ ಸಂಗೀತ ರವರು ತಾಲೂಕು ಯೋಜನಾಧಿಕಾರಿ ಸುರೇಂದ್ರರವರು “ಗ್ರಾಮ ಪಂಚಾಯತ್ ಸದಸ್ಯೆ ವಿದ್ಯಾ, ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಮಧುರಾ ವಸಂತ್, ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಮೀಳ, ಆಶಾ, ಪ್ರಭಾರವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here