ಬೆಳ್ತಂಗಡಿ ಶಾಸಕರ ಕಛೇರಿ “ಶ್ರಮಿಕ”ಕಾರ್ಯಾಲಯ ಉದ್ಘಾಟನೆ

0

ಬೆಳ್ತಂಗಡಿ: ಸರಕಾರದ ವಿವಿಧ ಯೋಜನೆಗಳನ್ನು ತಾಲೂಕಿನ ಜನರಿಗೆ ಪ್ರಾಮಾಣಿಕವಾಗಿ ಮುಟ್ಟಿಸುವುದಲ್ಲದೇ ಜನರ ಬೇಡಿಕೆ ಆಶೋತ್ತರಗಳನ್ನು ಬಗೆಹರಿಸುವ ಶ್ರಮಿಕ ಕಛೇರಿ ಶ್ರಮಜೀವಿಗಳ ಬಾಳಲ್ಲಿ ಬೆಳಕಾಗಿ ಮೂಡಿಬರಲಿ ಎಂದು ಬಿಜೆಪಿ ಪ್ರಭಾರಿ ಹರಿಕೃಷ್ಣ ಬಂಟ್ವಾಳ ಹೇಳಿದರು.

ಅವರು ಬೆಳ್ತಂಗಡಿಯ ಶಾಸಕರ ಕಛೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಕಳೆದ ಅವಧಿಯಲ್ಲಿ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಮಾಡಿದ ಅಭೂತಪೂರ್ವ ಅಭಿವೃದ್ಧಿಯಿಂದಾಗಿ ಹದಿನೆಂಟು ಸಾವಿರಕ್ಕಿಂತಲೂ ಅಧಿಕ ಮತಗಳಿಂದ ಎರಡನೇ ಬಾರಿಗೆ ಗೆದ್ದು ಬಂದು ನಮ್ಮ ಕರಾವಳಿಗೆ ಯುವಶಕ್ತಿಯಾಗಿ ಅವರು ಮೂಡಿ ಬಂದಿದ್ದಾರೆ ತಾಲೂಕಿನ ಪ್ರತಿ ಮನೆಗಳ ಮನೆ ಮಗನಾಗಿ ಬೆಳೆದು ಪ್ರತಿಯೊಬ್ಬರ ನೋವುಗಳಿಗೆ ಸ್ಪಂದಿಸಿ ಇಡೀ ರಾಜ್ಯದಲ್ಲೇ ಬೆಳ್ತಂಗಡಿ ತಾಲೂಕನ್ನು ಮಾದರಿಯನ್ನಾಗಿಸಿರುವ ಶಾಸಕ ಹರೀಶ್ ಪೂಂಜ ಮತ್ತೊಮ್ಮೆ ತಾಲೂಕಿನ ಶಾಸಕರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ.ಮುಂದಿನ ದಿನಗಳಲ್ಲೂ ಇನ್ನಷ್ಟೂ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಅವರ ಯೋಜನೆ ಯೋಚನೆಗಳನ್ನು ಈಡೇರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಶುಭ ಹಾರೈಸಿದರು.

ಮಾಜಿ ಶಾಸಕ ಪ್ರಭಾಕರ ಬಂಗೇರ ಕಛೇರಿಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಮುಖರಾದ ಕೊರಗಪ್ಪ ನಾಯ್ಕ, ಕುಶಾಲಪ್ಪ ಗೌಡ, ಜಯಂತ ಗೌಡ, ಚೆನ್ನಕೇಶವ, ಬಾಲಕೃಷ್ಣ ಶೆಟ್ಟಿ ಸವಣಾಲು, ಪ್ರಶಾಂತ್ ಪಾರೆಂಕಿ, ಗಣೇಶ್ ಗೌಡ ನಾವೂರು, ಸೀತಾರಾಮ್ ಬೆಳಾಲ್, ಸೇರಿದಂತೆ ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರುಗಳು ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಹಾಗೂ ಹಿತೈಷಿಗಳನ್ನು ಶಾಸಕ ಹರೀಶ್ ಪೂಂಜ ಸ್ವಾಗತಿಸಿ ಆತ್ಮೀಯವಾಗಿ ಬರಮಾಡಿಕೊಂಡರು.

ಕಾರ್ಯದರ್ಶಿ ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here