ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ‘ಶುಚಿ ಜೀವನ ದರ್ಶನ’ ಎಂಬ ವಿಷಯದ ಕುರಿತು ಚಿಂತನ ಕಾರ್ಯಕ್ರಮ

0

ಉರುವಾಲು: ಉರುವಾಲು ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜು.1ರಂದು ಅಖಿಲ ಭಾರತ ಸಾಹಿತ್ಯ ಪರಿಷತ್, ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿಯ ಆಶ್ರಯದಲ್ಲಿ “ಶುಚಿ ಜೀವನ ದರ್ಶನ” ಎಂಬ ವಿಷಯದ ಕುರಿತು ಚಿಂತನ ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಭರತೇಶ ಶೆಟ್ಟಿ , ಎಕ್ಕಾರು ಆಗಮಿಸಿ ವಿದ್ಯಾರ್ಥಿಗಳಿಗೆ ಪೌರಾಣಿಕ ಪಾತ್ರ ಗಳ ಉದಾಹರಣೆಯೊಂದಿಗೆ ಆದರ್ಶ ವ್ಯಕ್ತಿಯಾಗಿ ಹೇಗೆ ಬಾಳಬೇಕು ಎಂಬ ಜೀವನ ಮೌಲ್ಯಗಳನ್ನು ಹಂಚಿಕೊಂಡರು.ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ ಇದರ ಬೆಳ್ತಂಗಡಿ ಸಮಿತಿಯ ಅಧ್ಯಕ್ಷರಾದ ಗಣಪತಿ ಕುಳಮರ್ವ ಇವರು ಎಲ್ಲರನ್ನೂ ಸ್ವಾಗತಿಸಿದರು.ಸುಂದರ ಶೆಟ್ಟಿ ಇವರು ಪ್ರಾಸ್ತಾವಿಕ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಇವರು ವಹಿಸಿದ್ದರು.ಶ್ರೀಮತಿ ಸುಭಾಶಿಣಿ
ಇವರು ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ಸದಸ್ಯರು ಶಿಕ್ಷಕ ವೃಂದದವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here