ಉತ್ತಮ ಸೇವೆಯಿಂದ ಸಮಾಜದ ಉತ್ಕೃಷ್ಟ ಬೆಳವಣಿಗೆಗೆ ಮುನ್ನಡೆ ಸಾಧ್ಯ- ಜನತಾ ದರ್ಶನ ಕಾರ್ಯಕ್ರಮದಲ್ಲಿ ದಿನೇಶ್ ಗುಂಡೂರಾವ್ ಹಲವಾರು ಅಹವಾಲು ಸ್ವೀಕಾರ

0

ಲಾಯಿಲ: ಜಿಲ್ಲೆಯ ಅಭಿವೃದ್ಧಿಗೆ ಶಾಸಕರು, ಅಧಿಕಾರಿಗಳು ಸಹಕರಿಸಬೇಕು.ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ.ಅಧಿಕಾರಿಗಳು ಜನರ ಬಳಿಗೆ ಹೋಗಬೇಕು.ಅಧಿಕಾರಿಗಳು ಜನರ ಸೇವೆ ಮಾಡಲು ಇರುವವರು.ಜನತೆ ಹಾಗೂ ಅಧಿಕಾರಿಗಳ ಸಂಪರ್ಕ ನಿಕಟವಾಗಿರಬೇಕು.ಈ ಕಾರ್ಯಕ್ರಮವು ಜನರ ಸಮಸ್ಯೆಗಳು, ಸರ್ಕಾರದ ಲೋಪದೋಷಗಳನ್ನು ಅರಿತುಕೊಳ್ಳಲು ಸಹಕಾರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ತಿಳಿಸಿದರು.

ಅವರು ಲಾಯಿಲದಲ್ಲಿ ಜು.8 ರಂದು ಸಂಗಮ ಸಭಾ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ದಿನೇಶ್ ಗುಂಡೂರಾವ್ ಅವರನ್ನು ಗೌರವಿಸಿದರು.

ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಕೆ ಹರೀಶ್ ಕುಮಾರ್, ಪ್ರತಾಪ ಸಿಂಹ ನಾಯಕ್, ಜಿಲ್ಲಾಧಿಕಾರಿ ಮುಲೈ ಮಹಿಲನ್, ಎಸ್ ಪಿ ರಿಷ್ಯಂತ್, ಸಿಇಒ ಡಾ.ಆನಂದ್, ಎ.ಸಿ ಗಿರೀಶ್ ನಂದನ್, , ಲಾಯಿಲ ಗ್ರಾ.ಪಂ.ಅಧ್ಯಕ್ಷೆ ಆಶಾ ಬೆನಡಿಕ್ಟ ಡಿ’ಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಶಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಸುಂದರ ಗೌಡ, ಎ.ಸಿ ಮ್ಯಾಥ್ಯೂ, ಶ್ರೀಧರ್ ಭಿಡೆ, ರಾಜಶೇಖರ ಶೆಟ್ಟಿ, ವಿವಿಧ ಇಲಾಖಾ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ತಹಶೀಲ್ದಾರ್ ಸುರೇಶ್ ಕುಮಾರ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here