ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

0

ಬೆಳ್ತಂಗಡಿ: 2023-24ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಮಹೋತ್ಸವ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಜು.18ರಂದು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ನಿಕಟಪೂರ್ವಾಧ್ಯಕ್ಷ ದೇವಿಪ್ರಸಾದ್ ಬೊಲ್ಮ, ನಿಕಟ ಕೋಶಾಧಿಕಾರಿ ಪಂಚಕ್ಷಾರಪ್ಪ, ಪ್ರಾಂತ್ಯ ಮಾಜಿ ಅಧ್ಯಕ್ಷ ಧರಣೇಂದ್ರ ಜೈನ್, ವಸಂತ ಶೆಟ್ಟಿ ಮೊದಲಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here