ಮಡಂತ್ಯಾರು : ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಜಿಲ್ಲಾ ವಾರ್ಷಿಕ ಮಿಲನೋತ್ಸವ -2023 ಸಮಾರೋಪ ಸಮಾರಂಭ ಬಂಟ್ವಾಳ ಘಟಕಕ್ಕೆ ಸಮಗ್ರ ಪ್ರಶಸ್ತಿ

0

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮ್ಹಾಲಕರ ಸಂಘ(ರಿ.)ಬೆಳ್ತಂಗಡಿ ಘಟಕದ ಸಾರಥ್ಯದಲ್ಲಿ ಜು.29 ರಂದು ಜಿಲ್ಲಾ ವಾರ್ಷಿಕ ಮಿಲನನೋತ್ಸವ 2023 ಸಮಾರೋಪ ಸಮಾರಂಭವು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಮ್ಯುನಿಟಿ ಹಾಲ್ ನಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ.ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು ಕೆ.ವಿಟ್ಲ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ,ಮಂಡತ್ಯಾರು ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಮೋರಾಸ್, ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಬೆಳ್ತಂಗಡಿಯ ಅಧ್ಯಕ್ಷ ಚಂದ್ರಶೇಖರ ಎಂ, ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಹಾಜಿ ಅಬ್ದುಲ್ ಲತೀಫ್, ಬೆಳ್ತಂಗಡಿ ಘಟಕದ ನಿಕಟಪೂರ್ವ ಅಧ್ಯಕ್ಷ ಜರ್ಮಿ ಡೇಸಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಶಿತ್ ಪೂಜಾರಿ, ಜಿಲ್ಲಾ ಕೋಶಾಧಿಕಾರಿ ಬಾಲಕೃಷ್ಣ ಕದ್ರಿ, ಬೆಳ್ತಂಗಡಿ ಅತಿಥ್ಯ ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಬಂಟ್ವಾಳ ಘಟಕದ ಅಧ್ಯಕ್ಷ ಪಿಯುಸ್ ಮ್ಯಾಕ್ಸಿಮ್ ಸಿಕ್ವೇರಾ, ಮಂಗಳೂರು ಘಟಕದ ಅಧ್ಯಕ್ಷ ಯುವರಾಜ್ ಜೈನ್, ಮೂಡುಬಿದ್ರೆ ಘಟಕದ ಅಧ್ಯಕ್ಷ ಗಣಪತಿ ಪೈ ಉಪಸ್ಥಿತರಿದ್ದರು.ವಿವಿಧ ಘಟಕಗಳು ಪದಾಧಿಕಾರಿಗಳು, ಮಾಲಕರು,ಕಾರ್ಮಿಕರು, ಹಾಜರಿದ್ದರು.ಸಂಘದ ಕಾರ್ಯದರ್ಶಿ ಬಿ.ಹರೀಶ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮವನ್ನು ಕಿರುತೆರೆಯ ಖ್ಯಾತ ನಿರೂಪಕಿ, ಕುಮಾರಿ ಕೀರ್ತಿ ನಿರೂಪಿಸಿದರು.

LEAVE A REPLY

Please enter your comment!
Please enter your name here