ಗುರುದೇವ ಮಠದಲ್ಲಿ ಶಶಿಧರ ಕೋಟೆಯವರ ಸಂಗೀತ ಸಂಭ್ರಮ

0

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾಸನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರರಣೆ ಅಂಗವಾಗಿ ಆ.11 ರಂದು ಗುರುದೇವ ಮಠದಲ್ಲಿ ಗಾನ ಗಂಧರ್ವ ಶಶಿಧರ ಕೋಟೆ ಇವರಿಂದ ಸಂಗೀತ ಸಂಭ್ರಮ ನಡೆಯಿತು.

ಸ್ವಾಮೀಜಿಯವರು ಶಶಿಧರ ಕೋಟೆ ಮತ್ತು ಬಳಗದವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಧರ್ಮಸ್ಥಳದ ಬಿ.ಭುಜಬಲಿ, ಬೆಳ್ತಂಗಡಿ ವೃತ್ತ ನೀರಿಕ್ಷಕ ಶಿವಕುಮಾರ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಕಾರ್ಯದರ್ಶಿ ವಿದ್ಯಾ ಕುಮಾರ್ ಕಂಚೋಡು, ಮಠದ ಟ್ರಷ್ಟಿ ತುಕಾರಾಮ ಸಾಲಿಯಾನ್, ರವೀಂದ್ರ ಪೂಜಾರಿ ಆರ್ಲ, ಸೀತಾರಾಮ ಬಿ. ಎಸ್. ಬೆಳಾಲು ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲು ಬೆಳಾಲು ಮಹಿಳಾ ತಂಡದಿಂದ ಭಜನೆ ನಡೆಯಿತು.

LEAVE A REPLY

Please enter your comment!
Please enter your name here