ಉಜಿರೆ: ಪ್ರೊ.ಎಸ್.ಪ್ರಭಾಕರ್ ಅವರಿಗೆ ಜೀವಮಾನ ಸಾಧನಾ ಪ್ರಶಸ್ತಿ ಪ್ರದಾನ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಥಮ ಪ್ರಾಚಾರ್ಯರಾಗಿ ಸುದೀರ್ಘ ಸೇವೆ ಸಲ್ಲಿಸಿ, ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಶಿಕ್ಷಣ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ಪ್ರೊ.ಎಸ್ . ಪ್ರಭಾಕರ್ ಅವರಿಗೆ ಆ.19 ರಂದು ಅವರ ಉಜಿರೆಯ ಮನೆಯಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗ್ಳೂರು ವಿ.ವಿ.ವಿಭಾಗ ಹಾಗು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ ಉಜಿರೆಯಲ್ಲಿ ನಡೆದ ಪ್ರೇರಣಾ ದಿನದಂಗವಾಗಿ ಜೀವಮಾನ ಸಾಧನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿ.ವಿ.ವಿಭಾಗದ ಅಧ್ಯಕ್ಷೆ ಡಾ|ಸುಧಾ ಎನ್. ವೈದ್ಯ, ರಾಜ್ಯಾಧ್ಯಕ್ಷ ಡಾ|ಗುರುನಾಥ ಬಡಿಗೇರ, ಮಂಗಳೂರು ವಿ.ವಿ.ಸಿಂಡಿಕೇಟ್ ಸದಸ್ಯ ಡಾ|ಕೆ.ಸಿ.ಮಹದೇಶ, ಅಭಿನಂದನಾ ನುಡಿಗಳನ್ನಾಡಿದ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ|ಮಾಧವ ಎಂ.ಕೆ., ಕಾರ್ಯದರ್ಶಿ ವೆಂಕಟೇಶ ನಾಯಕ, ಕಾರ್ಯಕ್ರಮ ಉದ್ಘಾಟಿಸಿದ ಉಜಿರೆ ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ|ಸತೀಶ್ಚಂದ್ರ ಎಸ್, ಎಸ್.ಡಿ.ಎಂ.ಕಾಲೇಜು ಪ್ರಾಚಾರ್ಯ ಡಾ|ಬಿ. ಎ.ಕುಮಾರ ಹೆಗ್ಡೆ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರೊ. ಎಸ್ .ಪ್ರಭಾಕರ್ ಅವರು ಸನ್ಮಾನಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here