ಶಿರ್ಲಾಲು ಗ್ರಾ.ಪಂ ನಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ

0

ಶಿರ್ಲಾಲು: ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಗೃಹ ಲಕ್ಷ್ಮಿ ಯೋಜನೆಯ ಉದ್ಘಾಟನೆಯನ್ನು ವೀಕ್ಷಣೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ಉದ್ದೇಶಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ.ಎಂ ಶೆಟ್ಟಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ ಬಂಗೇರ, ಸದಸ್ಯರುಗಳಾದ ತಾರಾನಾಥ ಗೌಡ, ಮಾಧವ ಕುಲಾಲ್, ಕೊರಗಪ್ಪ, ಗೀತಾ, ಪಂ.ಅಭಿವೃದ್ಧಿ ಅಧಿಕಾರಿ ರಾಜು, ಪಂ.ಕಾರ್ಯದರ್ಶಿ ಮೋನಮ್ಮ, ನೌಕರಾದ ಪವಿತ, ಸರೋಜಿನಿ, ಸುಪ್ರಿಯಾ, ದಿನೇಶ್, ಹರೀಶ್, ವಿಶ್ವನಾಥ, ಕರಂಬಾರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪುಷ್ಪರಾಜ್ ಎಂ.ಕೆ, .ಎಪಿಎಂಸಿ ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಣಮ್ಮ ಪಿ.ಜೈನ್, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಜಯಶೀಲ ಕುಶಾಲಪ್ಪ ಗೌಡ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿರು ಆಶಾ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಮತ್ತು ಐನೂರು ಜನಕ್ಕೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here