ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ.ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

0

ಬೆಳ್ತಂಗಡಿ: ಆರಾಧನಾ ಮಹೋತ್ಸವದ ಎರಡನೇ ದಿನದಂದು ರಾಘವೇಂದ್ರ ಮಠದಲ್ಲಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರರಾಗಿರುವ ಡಾ! ಬಿಎ ಕುಮಾರ ಹೆಗ್ಡೆ ದಂಪತಿಗಳಿಗೆ ಕ್ಷೇತ್ರದ ಪರವಾಗಿ ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯದರ್ಶಿಗಳಾದ ಶೇಖರ ಬಂಗೇರ, ಕೋಶಾಧಿಕಾರಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಗೌರವ ಸಲಹೆಗಾರರಾದ ಮಂಜುನಾಥ ರೈ, ಕ್ಷೇತ್ರದ ಪುರೋಹಿತರಾದ ರಾಘವೇಂದ್ರ ಭಾಂಗಿಣ್ಣಾಯ ಹಾಗೂ ಇತರರು ಹಾಜರಿದ್ದರು.

ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನೆರವೇರಿತು.

LEAVE A REPLY

Please enter your comment!
Please enter your name here