ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

0

ಕಾಯರ್ತಡ್ಕ: ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೊಕ್ಕಡ ವಲಯ ಮಟ್ಟದ ಅಂಡರ್ 14 ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಸೆಪ್ಟೆಂಬರ್ 13ರಂದು ನಡೆಯಿತು.

ಕಳೆಂಜ ಪಂಚಾಯತ್ ಅಭಿವೃದ್ಧಿ ಅಧಿಕಾರಿಯದ ಹೊನ್ನಮ್ಮ.ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ವೇದಿಕೆಯಲ್ಲಿ ಶಾಲೆಯ ಮುಖ್ಯ ಗುರುಗಳಾದ ದಿವ್ಯ ಮರಿಯ ಎಸ್.ಹೆಚ್ ಸಂಚಾಲಕರಾದ ಮೆರ್ಸಿ ಚೆರಿಯನ್, ನಿತ್ಯಾನಂದ ರೈ, ಪೋಷಕ ಸಂಘದ ಅಧ್ಯಕ್ಷರಾದ ಮನೋಜ್, ಉಪಾಧ್ಯಕ್ಷೆ ಸಾವಿತ್ರಿ, ಕೊಕ್ಕಡ ವಲಯದ ಕ್ರೀಡಾ ಸಂಯೋಜಕರಾದ ಶೀನಪ್ಪ ಗೌಡ ಕೊಕ್ಕಡ ಮತ್ತು ಪೆರ್ಲ ವಲಯದ ಸಿ.ಆರ್.ಪಿ ವಿಲ್ಫ್ರೆಡ್ ಪಿಂಟೋ ಉಪಸ್ಥಿತರಿದ್ದರು.

ಸ್ವಾಗತವನ್ನು ಜ್ಯೋತಿ, ಧನ್ಯವಾದ ಪುಷ್ಪ, ಕಾರ್ಯಕ್ರಮ ನಿರೂಪಣೆಯನ್ನು ಸುರೇಶ್ ರವರು ನೆರವೇರಿಸಿದರು.

ತದನಂತರ ನಡೆದ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸ.ಉ ಹಿ.ಪ್ರಾಥಮಿಕ ಶಾಲೆ ಬರೆಂಗಾಯದ ಮಕ್ಕಳು ಪಡೆದುಕೊಂಡರು.
ದ್ವಿತೀಯ ಸ್ಥಾನ ಸ.ಉ.ಹಿ.ಪ್ರಾಥಮಿಕ ಶಾಲೆ ಕನ್ಯಾಡಿ ಇವರು ಪಡೆದರು.

ಬಾಲಕಿಯರ ವಿಭಾಗದಲ್ಲಿ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ದ್ವಿತೀಯ ಸ್ಥಾನ ಸ.ಉ.ಹಿ.ಪ್ರಾಥಮಿಕ ಶಾಲೆ ಕನ್ಯಾಡಿ ಇವರು ಪಡೆದರು.

LEAVE A REPLY

Please enter your comment!
Please enter your name here