ಪಣಕಜೆ: ಶ್ರೀ ಕೃಷ್ಣ ಭಜನಾ ಮಂದಿರದ ಸಭಾಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

0

ಪಣಕಜೆ: ಶ್ರೀ ಕೃಷ್ಣ ಭಜನಾ ಮಂದಿರದ ಸಭಾಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂಪಾಯಿ ಎರಡು ಲಕ್ಷ ಸಹಾಯಧನವನ್ನು ಸೆ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿಯಾದ ದಯಾನಂದ್ ಪೂಜಾರಿ ಮತ್ತು ಗುರುವಾಯನಕೆರೆ ವಲಯದ ಮೇಲ್ವಚಾರಕರಾದ ಅಚ್ಚುತರವರು ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರಿಗೆ ಸಹಾಯಧನದ ಮುಂಗಡ ರಶೀದಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಣಂದೂರು ಒಕ್ಕೂಟದ ಅಧ್ಯಕ್ಷರಾದ ಸತೀಶ್ ಆಚಾರ್ಯ ಹಾಗೂ ಕೃಷ್ಣಪ್ಪ ಮೂಲ್ಯ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಹರೀಶ್ ಪೂಜಾರಿ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ರೋಹಿತ್ ಮತ್ತು ಸೋಣಂದೂರು ವಲಯದ ಸೇವಾ ಪ್ರತಿನಿಧಿಯಾದ ಆನಂದ ಪೂಜಾರಿ ಮತ್ತು ಪುಷ್ಪ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಸಮಿತಿಯ ಸದಸ್ಯರಾದ ಹರೀಶ್ ಮೂಲ್ಯ ಶ್ರೀಧರ ವಡ್ಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here