ಓಡಿಲ್ನಾಳ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಬೆಳ್ತಂಗಡಿ ವಾಣಿ ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

0

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಇವರ ಪ್ರಾಯೋಜಕತ್ವದ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಹಳೆಕೋಟೆ, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2023ರ ವಾರ್ಷಿಕ ವಿಶೇಷ ಶಿಬಿರವು ಅ.13ರಿಂದ ಅ.19ರವರೆಗೆ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಓಡಿಲ್ನಾಳ ಇಲ್ಲಿ ನಡೆಯಲಿದೆ.

ಸ್ವಚ್ಛ ಪರಿಸರ ಮತ್ತು ಸ್ವಸ್ಥ ಸಮಾಜಕ್ಕಾಗಿ ಯುವಜನತೆ ಎಂಬ ಶೀರ್ಷಿಕೆಯ ಅಡಿಯಲ್ಲಿ ಈ ಬಾರಿಯ ವಾರ್ಷಿಕ ವಿಶೇಷ ಶಿಬಿರವು ನಡೆಯಲಿದೆ. ಅ.13ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಶಿಬಿರವನ್ನು ಉದ್ಘಾಟಿಸಲಿದ್ದಾರೆ.

ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಪಟ್ಟ ಶೈಕ್ಷಣಿಕ ತರಬೇತಿ ಕಾರ್ಯಗಾರಗಳು, ಶ್ರಮದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಶಿಬಿರದಲ್ಲಿ ಜರಗಲಿದೆ.ಅ.19ರಂದು ಶಿಬಿರವು ಸಮಾರೋಪಗೊಳ್ಳಲಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here