ಬೆಳ್ತಂಗಡಿ: ಮರಾಠಿ ಸಮಾಜ ಸೇವಾ ಸಂಘದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ: ಮರಾಠಿ ಸಮಾಜ ಸೇವಾ ಸಂಘ ಇದರ ವತಿಯಿಂದ ನಡೆಯುವ ಮರಾಟಿ ಕ್ರೀಡಾಕೂಟ-2023 ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಡಕೋಡಿ ಶ್ರೀ ಆದಿಶಕ್ತಿ ಮಹಾಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ದೇವಸ್ಥಾನದ ಭಕ್ತರು ಹಾಗೂ ಬಡಕೋಡಿ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.

ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಉಪಾಧ್ಯಕ್ಷರಾದ ಸತೀಶ್ ಹೆಚ್ ಎಲ್ ಇವರು ಮಾತನಾಡಿ ಮುಂಬರುವ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಸಂಘಕ್ಕೆ ಮಾತ್ರವಲ್ಲದೇ ತಾಲೂಕಿನ ಮರಾಟಿ ಬಂಧುಗಳಿಗೆ ಕೂಡ ಇರುವುದಾಗಿ ತಿಳಿಸಿದರು.ಅಲ್ಲದೆ ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಮರಾಠಿ ಬಂಧುಗಳಲ್ಲಿ ವಿನಂತಿಸಿ ಕೊಂಡರು.

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾದ ಸತೀಶ್ ಹೆಚ್ ಎಲ್ ಪ್ರಧಾನ ಕಾರ್ಯದರ್ಶಿಗಳಾದ ತಾರಾನಾಥ್ ನಾಯ್ಕ್, ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ್, ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಪ್ರಭಾಕರ ನಾಯ್ಕ್ ಭಾಗವಹಿಸಿದ್ದರು.

ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ್ ಇವರು ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here