ಶಿರ್ಲಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ- ಕಾಮಗಾರಿಗಳನ್ನು ವೀಕ್ಷಿಸಿದ ಶಾಸಕ ಹರೀಶ್ ಪೂಂಜ

0

ಶಿರ್ಲಾಲು: ಇತಿಹಾಸ ಪ್ರಸಿದ್ಧ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು, ದೇವಸ್ಥಾನದಲ್ಲಿ ನಡೆಯುತ್ತಿರುವ ಜೀರ್ಣೋದ್ಧಾರ ಕಾಮಗಾರಿಗಳನ್ನು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜ ವೀಕ್ಷಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಪಾರೆಂಕಿ ಸ್ವಾಗತಿಸಿದರು.

ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್, ಅರ್ಚಕ ಸೂರ್ಯನಾರಾಯಣ ಭಟ್, ತಾರಾನಾಥ ಗೌಡ, ದೇಜಪ್ಪ ಪೂಜಾರಿ, ಮಾಧವ ಕುಲಾಲ್, ನಾರಾಯಣ ಗೌಡ, ಸುಪ್ರೀತ್ ಜೈನ್, ಚಿದಾನಂದ, ಪ್ರಸಾದ್, ಸತೀಶ್, ಶ್ರೀಧರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here