ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಮಾಯ ಕಾರ್ಯಕ್ಷೇತ್ರದ ಅಮೃತ ಸ್ವ-ಸಹಾಯ ಸಂಘದ ಸದಸ್ಯರಾದ ಪ್ರಭಾಕರ್ ಮಡಿವಾಳ ರವರ ತಾಯಿ ಬಾಗಿ ಮಡಿವಾಳರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ವೀಲ್ ಚೇರ್ ರನ್ನು ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯನ್ ರವರು ವಿತರಿಸಿದರು.

ಈ ಸಂದರ್ಭ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ಪದಾಧಿಕಾರಿಯಾದ ರಾಮಚಂದ್ರ, ಛತ್ರಪತಿ ಶಿವಾಜಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಶಾಂತ್,ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್, ಉಜಿರೆ ವಲಯದ ಮೇಲ್ವಿಚಾರಕಿಯಾದ ವನಿತಾ, ಸೇವಾ-ಪ್ರತಿನಿಧಿಯಾದ ಪ್ರಭಾರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here