ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ-ಇರುಮುಡಿ ಕಟ್ಟುವ ಕಾರ್ಯಕ್ರಮ

0

ಬಳಂಜ: ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಅಯ್ಯಪ್ಪ ಭಕ್ತ ವೃಂದ ಬಳಂಜ ಬದಿನಡೆ ಇದರ ವತಿಯಿಂದ ಜ.12ರಂದು ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಗುರುಸ್ವಾಮಿಗಳ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ವೃತಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಮತ್ತು ಅಯ್ಯಪ್ಪ ಪೂಜೆಯು ಬದಿನಡೆ ಕ್ಷೇತ್ರದಲ್ಲಿ ನಡೆಯಲಿದೆ.

ಹಲವು ವರ್ಷಗಳಿಂದ ಇಲ್ಲಿಂದ ಭಕ್ತರು ಶಬರಿಮಲೆ ಯಾತ್ರೆಯನ್ನು ಮಾಡುತ್ತಿದ್ದು ಸುಂದರವಾದ ಶಿಲಾಮಯ ಅಯ್ಯಪ್ಪ ಸ್ವಾಮಿಯ ದೇಗುಲವಿದ್ದು ಹತ್ತಿರದಲ್ಲಿ ಫಲ್ಗುಣಿ ನದಿ ಹರಿಯುತ್ತಿದೆ.

ಸುದ್ದಿ ಬಿಡುಗಡೆ ಪ್ರತಿನಿಧಿ ಸದಾನಂದ ಸಾಲಿಯಾನ್, ಸತೀಶ್ ಬಿ.ಕೆ, ವಿಜಯ ಹೆಗ್ಡೆ, ಪ್ರವೀಣ್ ಕುಮಾರ್ ಲಾಂತ್ಯಾರ್, ಚಂದ್ರಶೇಖರ್ ಪಿಟ್ಟರ್, ದರಣೇಂದ್ರ ಜೈನ್, ಜಯ ಶೆಟ್ಟಿ ನಾಲ್ಕುರು ಸೇರಿದಂತೆ 15 ಮಂದಿ ಅಯ್ಯಪ್ಪ ಭಕ್ತರು ಮಾಲೆ ಹಾಕಿದ್ದು ಮಕರ ಜ್ಯೋತಿಯ ಪುಣ್ಯ ಕಾಲದಲ್ಲಿ ಶಬರಿಮಲೆ ಯಾತ್ರೆ ಮಾಡಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

LEAVE A REPLY

Please enter your comment!
Please enter your name here