ವೇಣೂರು ಐಟಿಐ ಕಾಲೇಜಿನಲ್ಲಿ ಭವಿಷ್ಯದ ಮತದಾರರೊಂದಿಗೆ ಸ್ವೀಪ್ ಸಮಿತಿ ಸಂವಾದ

0

ವೇಣೂರು: ಶ್ರಿ.ಧ.ಮಂ. ಐಟಿಐ ಕಾಲೇಜು ವೇಣೂರಿನಲ್ಲಿ ಮಾ.27ರಂದು ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿಯ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯುವ ಮತ್ತು ಭವಿಷ್ಯದ ಮತದಾರರಿಗೆ ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾ. ಪಂ.ನ ಕಾರ್ಯನಿರ್ವಹಣಾಧಿಕಾರಿ ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷರು ವೈಜಣ್ಣ, ಕಾಲೇಜಿನ ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್, ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್, ತಾ.ಪಂ.ಅಧೀಕ್ಷಕ ಡಿ. ಪ್ರಶಾಂತ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here