ವಸಂತ ಬಂಗೇರರ ಉತ್ತರ ಕ್ರಿಯೆಯ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

0

ಬೆಳ್ತಂಗಡಿ: ಮೇ 8ರಂದು ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರ ಉತ್ತರಕ್ರಿಯೆ ಮೇ 21ರಂದು ಗುರುವಾಯನಕೆರೆ-ಕುವೆಟ್ಟು ಮಂಜಿಬೆಟ್ಟು, ಎಫ್.ಎಮ್.ಗಾರ್ಡನ್ ನಲ್ಲಿ ನಡೆಯಲಿದ್ದು
ಕಾರ್ಯಕ್ರಮ ಪೂರ್ವ ತಯಾರಿ ಬಗ್ಗೆ ಬಂಗೇರರ ಅಭಿಮಾನಿಗಳ ಸಭೆಯು ಮೇ 18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಸಭಾ ಭವನದಲ್ಲಿ ನಡೆಯಿತು.

ಬಂಗೇರರ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ ಇಳಂತಿಲ ಕಾರ್ಯಕ್ರಮದ ಬಗ್ಗೆ ತಿಳಿಸಿ ಅಭಿಮಾನಿಗಳು, ಹಿತೈಷಿಗಳು ಭಾಗವಹಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ಜಿ.ಪ.ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಅಭಿಮಾನಿ ಬಳಗದ ಎನ್. ಲಕ್ಷ್ಮಣ ಗೌಡ ಇಂದಬೆಟ್ಟು, ಬಂಗೇರರ ಪುತ್ರಿಯರಾದ ಪ್ರೀತೀತಾ ವಿಜೇತ್, ಬಿನುತಾ ಬಂಗೇರ, ಅಳಿಯ ಧರ್ಮವಿಜೇತ್, ಕೆ.ವಸಂತ ಬಂಗೇರ ಅಭಿಮಾನಿಗಳು, ಹಿತೈಷಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here