ಅಕ್ರಮ ಕಲ್ಲು ಗಣಿಗಾರಿಕೆ- ಬಂಧಿತ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಗೆ ಪೊಲೀಸ್ ಕಸ್ಟಡಿ

0

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮೂಡಲದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ(35ವ)ಗೆ ಮೇ 27ರವರೆಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.

ಬಂಧಿತ ಶಶಿರಾಜ್ ಶೆಟ್ಟಿಯವರನ್ನು ಮೇ 24ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಹೆಚ್ಚಿನ‌ ತನಿಖೆಗಾಗಿ ನ್ಯಾಯಾಲಯ ಅವರಿಗೆ ಪೊಲೀಸ್ ಕಸ್ಟಡಿ ವಿಧಿಸಿದೆ.

ಶಶಿರಾಜ್ ಶೆಟ್ಟಿ ಪರ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ವಾದ ಮಂಡಿಸಿದ್ದು ಸರಕಾರದ ಪರವಾಗಿ ಎಪಿಪಿಗಳಾದ ದಿವ್ಯರಾಜ್ ಹೆಗ್ಡೆ ಮತ್ತು ಅಶಿತಾ ವಾದಿಸಿದ್ದರು.

ಶಶಿರಾಜ್ ಶೆಟ್ಟಿ ಆಸ್ಪತ್ರೆಗೆ ದಾಖಲು: ಮೇ 24ರಂದು ಪೊಲೀಸರು ನ್ಯಾಯಾಲಯದಿಂದ ಶಶಿರಾಜ್ ಶೆಟ್ಟಿಯನ್ನು ವಶಕ್ಕೆ ಪಡೆದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here