ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆಯ ತ್ರೈಮಾಸಿಕ ಸಭೆಯು ಬದನಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷ ಬಾಬುನಾಯ್ಕರವರ ಅಧ್ಯಕ್ಷತೆಯಲ್ಲಿ ನಡೆಯಿತು.

ನೂತನ ಒಕ್ಕೂಟದ ಅಧ್ಯಕ್ಷ ಸುರೇಶ್ ನಾಯ್ಕರವರು ಒಕ್ಕೂಟ ಸಭೆಯನ್ನು ಉದ್ಘಾಟಿಸಿದರು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಾಕ್ಷಿ ಎಸ್.ಹೆಚ್.ಜಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಂತಿಯವರು ಮಂಡಿಸಿದರು.

ಒಕ್ಕೂಟದ ಗತ ಸಭೆಯ ವರದಿಯನ್ನು ಲೋಲಾಕ್ಷಿರವರು ಮಂಡಿಸಿದರು.

ವಲಯ ಮೇಲ್ವಿಚಾರಕಿ ವನಿತಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು,ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಹೇಮಲತಾರವರು ಉಪಸ್ಥಿತರಿದ್ದರು.

ಪ್ರಮೀಳಾ ಕಾರ್ಯಕ್ರಮ ಸ್ವಾಗತಿಸಿ, ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here