ಬೆಳ್ತಂಗಡಿ ವಲಯದ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ- ಒಕ್ಕೂಟದ ಪದಾಧಿಕಾರಿಗಳ ಹಾಗೂ ಸದಸ್ಯರ ಸಹಕಾರದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇನ್ನಷ್ಟು ಬಲಿಷ್ಠ: ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಬಿ ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷ ಚರಣ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೆ.ಸಿ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಒಕ್ಕೂಟದ ನೂತನ ಅಧ್ಯಕ್ಷ ತ್ರೇಸ್ಯ ಎಂ.ವಿ ದೀಪ ಪ್ರಜ್ವಲಿಸಿ ಒಕ್ಕೂಟದ ಸಭೆಯನ್ನು ಉದ್ಘಾಟಿಸಿದರು.

ತ್ರೈಮಾಸಿಕ ಸಭೆಯ ಜವಬ್ದಾರಿಯನ್ನು ಭಾಗ್ಯಶ್ರಿ ಸಂಘದ ಸದಸ್ಯರು ವಹಿಸಿಕೊಂಡಿದ್ದರು.ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಶ್ರೀ ಮಂಡಿಸಿದರು.

ಒಕ್ಕೂಟದ ಗತ ಸಭೆಯ ವರದಿಯನ್ನು ಸುಮಂತ್ ರವರು ಮಂಡಿಸಿದರು.ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಬಗ್ಗೆ ಮಾಹಿತಿಯನ್ನು ನೀಡಿದರು.

ವಲಯ ಮೇಲ್ವಿಚಾರಕ ಹರೀಶ್ ರವರು ಹಾಗು ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಸೌಮ್ಯ ಉಪಸ್ಥಿತರಿದ್ದರು.

ಸುಮಂತ್ ರವರು ಸ್ವಾಗತಿಸಿದರು.

LEAVE A REPLY

Please enter your comment!
Please enter your name here