ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

0

ಬಾರ್ಯ: ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಸುಂದರ ನೂರಿತ್ತಾಯ (68ವ)ರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರು ಪುತ್ತೂರು ಕ್ಯಾಂಪೋ ನಿವೃತ್ತ ಮ್ಯಾನೇಜ‌ರ್ ಆಗಿದ್ದು ಪುತ್ತೂರು ಶಿವಳ್ಳಿ ಸಂಪದ ಸೌಹಾರ್ಧ ಸಂಘದ ನಿವೃತ್ತ ಸಿಇಓ, ಪುತ್ತೂರಿನಲ್ಲೇ ವಾಸ್ತವ್ಯ ಹೊಂದಿದ್ದರು.ಮೃತರು ಪತ್ನಿ ಪ್ರೇಮಾ, ಪುತ್ರಿಯರಾದ ಶುಷ್ಕ ಮತ್ತು ಸ್ಮಿತಾ, ಸಹೋದರ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ನನ್ನ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ಹರೀಶ್ ಪುತ್ತೂರಾಯ, ಉಪಾಧ್ಯಕ್ಷ ಜಯರಾಮ ಕೆದಿಲಾಯರವರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸಲ್ಲಿಸಿದರು. ಮೃತರ ಮನೆಗೆ ಶಿವಳ್ಳಿ ಸಂಪದದ ಗಣ್ಯರು ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here