ಬೂಡುಜಾಲು: ಧರ್ಮಸ್ಥಳ ಒಕ್ಕೂಟದ ಸಭೆ ಹಾಗೂ ವಿಶ್ವ ತಂಬಾಕು ವಿರೋಧಿ ದಿನಾಚರಣೆ

0

ನಿಡ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯದ ಬುಡುಜಾಲ್ ಒಕ್ಕೂಟದ ಸಭೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಸುರೇಶ ನಲಿಕೆ, ಕೊರಗಪ್ಪ ಗೌಡ, ಉಸ್ಮಾನ್, ಹಾಗೂ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಮೋನಪ್ಪ ಗೌಡ, ಒಕ್ಕೂಟ ಎಲ್ಲಾ ಪದಾಧಿಕಾರಿಗಳು ಸೇವಾಪ್ರತಿನಿಧಿ ಸೇಸಪ್ಪ ಗೌಡ ಉಪಸ್ಥಿತರಿದ್ದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಕಾರಿ ದಿವಾಕರ ಪೂಜಾರಿ ತಂಬಾಕು ವಿರೋಧಿ ಕಾರ್ಯಕ್ರಮದಡಿಯಲ್ಲಿ ತಂಬಾಕು ಸೇವನೆಯಿಂದ ಆಗುವ ಸಮಸ್ಯೆಗಳು ಮತ್ತು ರೋಗಗಳು ಉಲ್ಬಾನವಾಗುವ ರೀತಿ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here