ಬೆಳ್ತಂಗಡಿ: ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

0

ಬೆಳ್ತಂಗಡಿ: ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 617 ಅಂಕಗಳನ್ನು ಪಡೆದ ಬೆಳ್ತಂಗಡಿ ಸಂಜಯನಗರ ಸಿಮ್ರಾ ಪರ್ವಿನ್ ಅವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು.

ನ್ಯಾಯಾಲಯದಲ್ಲಿ ಸರಕಾರಿ ಅಭಿಯೋಜಕ (ಪಬ್ಲಿಕ್ ಪ್ರಾಸಿಕೂಟರ್) ಆಗಿರುವ ಮಹಮ್ಮದ್ ಶೌಕತ್ ಅಲಿ ಹಾಗೂ ಶಿಕ್ಷಕಿ ಸಫಿಯಾ ದಂಪತಿಯ ಪುತ್ರಿ ಯಾಗಿರುವ ಸಿಮ್ರಾ ಫರ್ವಿನ್ ಕಲಿಕೆ ಮತ್ತು ಕಲಿಕೇತರ ವಿಷಯದಲ್ಲೂ ಪ್ರತಿಭಾನ್ವಿತೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎನ್.ಎ ಹಾರೀಸ್, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಂ.ಫಾರೂಕ್, ಅತ್ತೂರು ಚಾಯಬ್ಬ, ಹಿರಿಯ ಪತ್ರಕರ್ತ ಬಿ.ಎಂ. ಹನೀಫ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here