ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

0

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ ಅನೂಪ್ ಕೃಷ್ಣ ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ವಾಕರ್ ಅನ್ನು ಧರ್ಮಸ್ಥಳ ವಲಯದ ಮೇಲ್ವಿಚಾರಕ ರವೀಂದ್ರ ಸರ್ ಅನೂಪ್ ಕೃಷ್ಣ ರವರ ಮನೆಯಲ್ಲಿ ವಿತರಿಸಿದರು.

ಇತ್ತೀಚೆಗೆ ಧ್ವಿಚಕ್ರ ವಾಹನದಲ್ಲಿ ನೇತ್ರಾವತಿ ಬಳಿ ಹೋಗುತ್ತಿರುವಾಗ ಅಪಘಾತ ಸಂಭವಿಸಿ ಬಲ ಕಾಲಿಗೆ ಬಲವಾದ ಪೆಟ್ಟು ಬಿದ್ದ ಕಾರಣ ತಕ್ಕ ಮಟ್ಟಿಗೆ ಸರಿಯಾಗಿ ನಡೆಯಲು ಆಗದ ಕಾರಣ ನಡೆದಾಡಲು ವಾಕರಿನ ಅವಶ್ಯಕತೆ ಇರುವುದರಿಂದ ಜೂನ್ 12ರಂದು ಅವರ ಮನೆಗೆ ಭೇಟಿ ನೀಡಿ ವಿತರಿಸಿದರು.

ಈ ಸಂದರ್ಭದಲ್ಲಿದಲ್ಲಿ ಬೆಳ್ತಂಗಡಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್, ಒಕ್ಕೂಟದ ಅದ್ಯಕ್ಷ ಸುಲೈಮಾನ್, ಕಾರ್ಯದರ್ಶಿ ಯಮುನಾ, ಸೇವಪ್ರತಿನಿದಿ ಸುಜಾತಾ, ಶೌರ್ಯ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ನಳಿನ್ ಕುಮಾರ್, ಶ್ರೀಧರ್ ಗೌಡ, ಮೋಹಿನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here