ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

0

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಕನ್ನಡ ಪ್ರೌಢ ಶಾಲಾ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ವಿಭಾಗಗಳಲ್ಲಿ 2023-24ರ ಎಸ್ ಎಸ್ ಎಲ್ ಸಿಯಲ್ಲಿ ಅತ್ಯುತ್ತಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಗೌರವಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕಇವರು ಸ್ಮರಣಿಕೆ ನೀಡಿ ಗೌರವಿಸುವುದರೊಂದಿಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ಪೋಷಕರೊಂದಿಗೆ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಸಂಸ್ಕಾರಗಳ ಬಗ್ಗೆ ಸಂವಾದ ನಡೆಸಿದರು.ವೇದಿಕೆಯಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ, ಶತಾಬ್ದಿ ವಿದ್ಯಾಲಯ ಸಮಿತಿಯ ಕಾರ್ಯದರ್ಶಿ ನಾರಾಯಣ ಫಡಕೆ ಹಾಗೂ ಎರಡೂ ಮಾಧ್ಯಮಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಚಂದ್ರಮತಿ ಮಾತಾಜಿ ಸ್ವಾಗತಿಸಿ, ಜಯಂತಿ ಮಾತಾಜಿ ಧನ್ಯವಾದಗೈದರು.ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here