ಗುರುವಾಯನಕೆರೆ: ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

0

ಗುರುವಾಯನಕೆರೆ: ಶ್ರೀ ಭ್ರಾಮರಿ ಭಜನಾ ಮಂಡಳಿಯಲ್ಲಿ ನಡೆಯುತ್ತಿರುವ ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆಯ ಕಾರ್ಯಕ್ರಮ ಗುರುವಾಯನಕೆರೆ ನಮ್ಮ‌ಮನೆ ಹವ್ಯಕ ಭವನದಲ್ಲಿ ಕುಣಿತ ಭಜನಾ ತರಬೇತಿ ಪಡೆಯಲಿಚ್ಚಿಸುವ ಮಕ್ಕಳ ಪೋಷಕರ ಪಾಲ್ಗೊಳ್ಳುವಿಕೆಯೊಂದಿಗೆ ನಡೆಯಿತು.

ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ. ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಉದ್ಘಾಟಿಸಿ ನಾವು ಕಲಿಸುತ್ತಿರುವ ಹಾಗೂ ಕಲಿಯುತ್ತಿರುವ ಭಜನೆಯು ನಮ್ಮ ಧಾರ್ಮಿಕ ಪರಂಪರೆಗೆ ಚ್ಯುತಿ ಬಾರದಂತೆ ಶ್ರದ್ಧಾ ಭಕ್ತಿಯಿಂದ ನಡೆಯುವಂತಾಗಲೆಂದು ಕಾರ್ಯಕ್ರಮಕ್ಕೆ ಶುಭ ಹಾರೈಸುತ್ತ ಭಜನೆಯಲ್ಲಿ ಮಕ್ಕಳ ಪಾಲ್ಗೊಳ್ವಿಕೆಯ ಮಹತ್ವದ ಬಗ್ಗೆ ಪೋಷಕರಿಗೆ ಮಾರ್ಗದರ್ಶನ ನೀಡಿದರು.

ಅಧ್ಯಕ್ಷತೆಯನ್ನು ಶ್ರೀ ಭ್ರಾಮರಿ ಭಜನಾ ಮಂಡಳಿಯ ಅಧ್ಯಕ್ಷ ರಮೇಶ್ ಬಂಗೇರ ಓಟ್ಲ ವಹಿಸಿದ್ದರು. ಭಜನಾ ತರಬೇತುದಾರರು, ತಾಲೂಕು ಕುಣಿತ ಭಜನೆಯ ತರಬೇತಿದಾರರ ಸಂಘದ ನೂತನ ಅಧ್ಯಕ್ಷ ಸಂದೇಶ್‌ ಮದ್ದಡ್ಕ, ಭಜನಾ ಮಂಡಳಿಯ ಕಾರ್ಯದರ್ಶ ಸುಮಿತ್ರಾ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕುಮಾರಿ ರಕ್ಷಾ ಸ್ವಾಗತಿಸಿ, ಕುಮಾರಿ ವೀಕ್ಷಿತಾ ವಂದಿಸಿದರು.ಕಾರ್ಯಕ್ರಮದಲ್ಲಿ ಕುಣಿತ ಭಜನೆ ತರಬೇತಿ ಪಡೆಯುವ ವಿಧ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here