ಮದ್ದಡ್ಕದಲ್ಲಿ ಬಸ್ ಪ್ರಾಬ್ಲೆಮ್- ಸಮಸ್ಯೆ ಪರಿಹರಿಸಲು ಆಗ್ರಹ

0

ಕುವೆಟ್ಟು: ಶಾಲಾ ಮಕ್ಕಳು ಮತ್ತು ಕೆಲಸಕ್ಕೆ ತೆರಳುವ ಕಾರ್ಮಿಕರು ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದೆ ಬೆಳಗ್ಗಿನ ಹೊತ್ತಲ್ಲಿ ಪರದಾಡುವ ಪರಿಸ್ಥಿತಿ ಮದ್ದಡ್ಕದಲ್ಲಿ ನಿರ್ಮಾಣವಾಗಿದೆ. ಜೂ 24ರಂದು ಮದ್ದಡ್ಕದಲ್ಲಿ ಪ್ರಯಾಣಿಕರು ಬಸ್ಸಿನಲ್ಲಿ ನೇತಾಡಿ‌ಕೊಂಡು ಹೋಗುವ ದೃಶ್ಯ ಕಂಡು ಬಂದಿದೆ.

ಶಾಲಾ ಮಕ್ಕಳಿಗೆ ಸರಿಯಾದ ಸಮಯಕ್ಕೆ ತರಗತಿಗೆ ತಲುಪಲೇಬೇಕಾದ ಅನಿವಾರ್ಯತೆ ಇದೆ. ಕಾರ್ಮಿಕರೂ ಸಮಯಕ್ಕೆ ಸರಿಯಾಗಿ ತೆರಳಬೇಕಿದೆ. ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಜನರು ಕಂಡ ಕಂಡ ವಾಹನ ಹತ್ತಿ ನೇತಾಡಿಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮದ್ದಡ್ಕ ಗ್ರಾಮೀಣ ಪ್ರದೇಶವಾದ್ದರಿಂದ ಕೆಲವೇ ಕೆಲವು ಬಸ್ಸುಗಳು ನಿಲುಗಡೆ ಇದೆ. ಈ ಮಳೆಗಾಲದ ಸಂದರ್ಭದಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here