ಉಜಿರೆ: ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡ ಜೂ.30ರಂದು ಉದ್ಘಾಟನೆಗೊಂಡಿತು.ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರ ಶರತ್ಕೃಷ್ಣ ಪಡುವೆಟ್ನಾಯ ದೀಪ ಬೆಳಗಿಸಿ ಉದ್ಘಾಟಿಸಿದರು.
![](https://belthangady.suddinews.com/wp-content/uploads/2024/06/compressed_InShot_20240630_111912909-1024x459.jpg)
ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ಭಾಗವಹಿಸಿದ್ದರು.
![](https://belthangady.suddinews.com/wp-content/uploads/2024/06/InShot_20240630_112124331-1024x459.jpg)
ಮಹಿಳಾ ಮಂಡಲದ ಗೌರವಾಧ್ಯಕ್ಷೆ ಸರಸ್ವತಿ ಎನ್.ರಾಜ್. ಉಜಿರೆ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ಉಪಸ್ಥಿತರಿದ್ದರು.
![](https://belthangady.suddinews.com/wp-content/uploads/2024/06/compressed_InShot_20240630_112443852-1024x459.jpg)
ಪ್ರಗತಿ ಮಹಿಳಾ ಮಂಡಲದ ಕಾರ್ಯದರ್ಶಿ ಗಾಯತ್ರಿ ಶ್ರೀಧರ್ ಮಹಿಳಾ ಮಂಡಲ 67 ವರ್ಷದಿಂದ ಬೆಳೆದು ಬಂದ ಕುರಿತು ಪ್ರಸ್ತಾವನೆಯೊಂದಿಗೆ ಮಾತನಾಡಿದರು. ಕೋಶಾಧಿಕಾರಿ ಪೂರ್ಣಿಮ ಸಂಜೀವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಗತಿ ಮಹಿಳಾ ಮಂಡಲ ನಡೆದು ಬಂದ ದಾರಿ ಕುರಿತು ಹೆಜ್ಜೆ ಗುರುತು ಸಂಚಿಕೆ ಬಿಡುಗಡೆಗೊಳಿಸಲಾಯಿತು.ಮಹಿಳಾ ಮಂಡಲವನ್ನು ಮುನ್ನಡೆಸಿದ ಅಧ್ಯಕ್ಷರು, ಕಾರ್ಯದರ್ಶಿಗಳನ್ನು ಗೌರವಿಸಲಾಯಿತು.