ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಸಭೆ

0

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅರಸಿನಮಕ್ಕಿ ವಲಯದ 8 ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ನಿಕಟ ಪೂರ್ವ ಹಾಗೂ ನೂತನ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಬಂಟರ ಚಾವಡಿ ಅರಸಿನಮಕ್ಕಿಯಲ್ಲಿ ನಡೆಯಿತು.

ದಿ. ಜು.12ರಂದು ಗುಡ್ರಾ ಮಲ್ಲೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯುವ ಒಕ್ಕೂಟದ ಪದಗ್ರಹಣ ಕಾರ್ಯಕ್ರಮವನ್ನು ನಡೆಸುವಾಗ ಪದಾಧಿಕಾರಿಗಳು ವಹಿಸಿಕೊಳ್ಳಬೇಕಾದ ಜವಾಬ್ದಾರಿಗಳು ಕಾರ್ಯಕ್ರಮಕ್ಕೆ ಅತಿಥಿಗಳನ್ನು ಆಹ್ವಾನಿಸುವ ಬಗ್ಗೆ ಕಾರ್ಯಕ್ರಮಕ್ಕೆ ಆಗುವ ಅಂದಾಜು ಖರ್ಚುಗಳು ವೆಚ್ಚಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಒಕ್ಕೂಟದ ಪದಾಧಿಕಾರಿಗಳು ಸಹಕಾರ ನೀಡುವ ಬಗ್ಗೆ ಮೇಲ್ವಿಚಾರಕರು ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹತ್ಯಡ್ಕ ಗ್ರಾಮದ ಹೊನ್ನಿಯವರಿಗೆ ನಿರ್ಗತಿಕ ಮಾಶಾಸನ ಕಾರ್ಯಕ್ರಮದಡಿಯಲ್ಲಿ ಮಂಜುರಾತಿ ಪತ್ರವನ್ನು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ವಲಯದ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳ ಸಮ್ಮುಖದಲ್ಲಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here