ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

0

ಬೆಳ್ತಂಗಡಿ: ಜು.6ರಂದು ಗೇರುಕಟ್ಟೆ ಅಂಚೆ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಇವರನ್ನು ಪುತ್ತೂರು ಉಪ ಅಂಚೆ ವಿಭಾಗದ ಹಾಗೂ ಗೇರುಕಟ್ಟೆ ಯುವಕರು ತಂಡದ ವತಿಯಿಂದ ಮೋಹಿನಿ ಮತ್ತು ಡಾಕಯ್ಯ ಗೌಡ ದಂಪತಿ ಸಮೇತವಾಗಿ ಗೇರುಕಟ್ಟೆ ಸಹಕಾರಿ ಭವನದಲ್ಲಿ ಸನ್ಮಾನ ನಡೆಯಿತು.
ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಅಧ್ಯಕ್ಷತೆ ವಹಿಸಿದ್ದರು.
ಅಂಚೆ ಇಲಾಖೆ ಪುತ್ತೂರು ವಿಭಾಗದ ಉಪ ಅಧಿಕ್ಷ ಮೋಹನ್, ಕಳಿಯ ಗ್ರಾ.ಪಂ.ಅಧ್ಯಕ್ಷ ದಿವಾಕರ ಎಂ. ಕಳಿಯ, ಸಿ.ಎ.ಬ್ಯಾಂಕ್ ಕಾರ್ಯನಿರ್ವಾಹಣಾಧಿಕಾರಿ, ಕವಿತಾ ಶೆಟ್ಟಿ, ಅಂಚೆ ಇಲಾಖೆ ನಿವೃತ್ತ ಕೂಸಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಗೇರುಕಟ್ಟೆ ವಿವಿಧ ಸಂಘದ ವತಿಯಿಂದ ಮತ್ತು ಹಿತೈಷಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಸ್ಥಳೀಯ ಯುವಕರ ತಂಡ ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು.
ಗುರುವಾಯನಕೆರೆ ಅಂಚೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗೇರುಕಟ್ಟೆ ಅಂಚೆ ಇಲಾಖೆ ಸಿಬ್ಬಂದಿ ಸವೀತಾ ಸ್ವಾಗತಿಸಿ, ಓಡಿಲ್ನಾಳ ಅಂಚೆ ಇಲಾಖೆ ಸಿಬ್ಬಂದಿ ಸುಪ್ರಿಯಾ ವಂದಿಸಿದರು.

ಮಂಗಳೂರು ಅಂಚೆ ಕಚೇರಿ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ಕಾರ್ಯಕ್ರಮ ನಿರೂಪಿಸಿದರು.

ಕಳಿಯ ಮತ್ತು ನ್ಯಾಯತರ್ಪು ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here