ಧರ್ಮಸ್ಥಳ: ವಲಯ ಜನಜಾಗೃತಿ ಸಮಿತಿ ಸಭೆ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿಜಿಸ್ಟರ್ ಬೆಳ್ತಂಗಡಿ ತಾಲೂಕು ಹಾಗೂ ಜನಜಾಗೃತಿ ಗ್ರಾಮ ಸಮಿತಿ ಧರ್ಮಸ್ಥಳ ವಲಯ ಇದರ ವತಿಯಿಂದ ಧರ್ಮಸ್ಥಳ ಗ್ರಾಮ ಪಂಚಾಯಿತಿ ನೇತ್ರಾವತಿ ಸಭಾಭವನದಲ್ಲಿ ವಲಯದ ಜನಜಾಗೃತಿ ಸಮಿತಿ ಸಭೆಯನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ, ತಾಲೂಕು ಜನಜಾಗೃತಿ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಡಿ.ಎ ರೆಹಮಾನ್, ಜನಜಾಗೃತಿ ಸಮಿತಿ ಸದಸ್ಯರಾದ ಶ್ರೀನಿವಾಸ ರಾವ್, ಧನಕೀರ್ತಿ ಆರಿಗ, ಜಯ ಮೋನಪ್ಪ ಗೌಡ, ಕಳೆಂಜ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕೆ.ಬಿ, ಯೋಜನಾಧಿಕಾರಿ ಸುರೇಂದ್ರ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಒಕ್ಕೂಟ ಅಧ್ಯಕ್ಷರಾದ ಸುಲೇಮಾನ್ ಉಪಸ್ಥಿತರಿದ್ದರು.

ಡಿ ಎ ರೆಹಮಾನ್ ರವರು ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿಯವರು ಮಧ್ಯವರ್ಜನ ಶಿಬಿರವನ್ನು ಮಾಡುವ ಮೂಲಕ ಅದೆಷ್ಟು ಮಹಿಳೆಯರ ಕಣ್ಣೀರು ಒರೆಸುವ ಕೆಲಸವನ್ನು ಮಾಡುತ್ತಿದ್ದಾರೆ ಹಾಗೂ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ಮತ್ತು ಮಾದಕ ವಸ್ತು ವಿರೋಧಿ ದಿನಾಚರಣೆ ಮಾಡುವ ಮೂಲಕ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡುವ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂಬುದಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಲಯದ ಜನಜಾಗೃತಿ ಸಮಿತಿ ಸದಸ್ಯರು, ಭಜನಾ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು, ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರುಗಳು, ನವಜೀವನ ಸಮಿತಿ ಸದಸ್ಯರು ಹಾಗೂ ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಳೆಂಜ ಬಿ ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿ ಭವಾನಿಯವರು ಸ್ವಾಗತಿಸಿದರು.ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here