ಬೆಳ್ತಂಗಡಿ: ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ವಾಣಿಜ್ಯ ಸಂಕೀರ್ಣ “ಶ್ರೀ ಗುರುಸಾನಿಧ್ಯ” ಲೋಕಾರ್ಪಣೆ

0

ಬೆಳ್ತಂಗಡಿ: ಶ್ರೀ ಗುರುದೇವ ವಿವಿದೊದ್ಧೇಶ ಸಹಕಾರ ಸಂಘದ ಕೇಂದ್ರ ಕಚೇರಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಮತ್ತು ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭ ಜು.13ರಂದು ಜರಗಿತು.

ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಡಳಿತ ಕಚೇರಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಉಪಾಧ್ಯಕ್ಷ ಭಗೀರಥ ಜಿ.ವಹಿಸಿದ್ದರು. ಸಭಾಭವನದ ಉದ್ಘಾಟನೆಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ನೆರವೇರಿಸಿದರು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಭಾಸ್ಕರ ಎಸ್.ಕೋಟ್ಯಾನ್, ಪುತ್ತೂರು ಕುಂಬಾರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಂ. ಪೆರುವಾಯಿ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಭಾಗವಹಿಸಲಿದ್ದರು. ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಗಣ್ಯರು, ಸದಸ್ಯರು, ವಿವಿಧ ಸಹಕಾರಿ ಸಂಘದ ಸಹಕಾರಿಗಳು ಹಾಜರಿದ್ದರು.

ನಿರ್ದೇಶಕ ಧರಣೇಂದ್ರ ಕುಮಾರ್ ಸ್ವಾಗತಿಸಿ, ವಿಶೇಷ ಅಧಿಕಾರರಿ ಮೋನಪ್ಪ ಪೂಜಾರಿ ಪ್ರಸ್ತಾವನೆಗೈದರು. ದಿನೇಶ್ ಸುವರ್ಣ ರಾಯಿ, ಪ್ರಜ್ಞಾ ಓಡಿನ್ನಾಳ ನಿರೂಪಿಸಿದರು.

ನಿರ್ದೇಶಕರುಗಳಾದ ಸುಜಿತಾ ವಿ ಬಂಗೇರ , ತನುಜಾ ಶೇಖರ್, ಸಂಜೀವ ಪ್ರಜಾರಿ, ಕೆ.ಪ್ರಿ.ದಿವಾಕರ, ಜಗದೀಶ್ಚಂದ್ರ ಡಿ.ಕೆ., ಚಂದ್ರಶೇಖರ, ಧರಣೇಂದ್ರ ಕುಮಾರ್ ಪಿ, ಗಂಗಾಧರ ಮಿತ್ತಮಾರು, ಆನಂದ ಪೂಜಾರಿ, ಡಾ.ರಾಜಾರಾಮ ಕೆ. ಬಿ., ಜಯವಿಕ್ರಮ್, ಸಂಘದ ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ ಕುಮಾರ್‌, ವಿವಿಧ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here