ವೇಣೂರು: ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆ, ಉಪಾಧ್ಯಕ್ಷರಿಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆ

0

ವೇಣೂರು: ವೇಣೂರು ಗ್ರಾಮ ಪಂಚಾಯತಿನ 2ನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಉಮೇಶ್ ಎನ್. ಇವರಿಗೆ ವೇಣೂರು ಪಂಚಾಯತಿನಲ್ಲಿ ಭಾರತೀಯ ಜನತಾ ಪಕ್ಷ ಮಹಾಶಕ್ತಿ ಕೇಂದ್ರದಿಂದ ಅಭಿನಂದನಾ ಕಾರ್ಯಕ್ರಮ ಜು.15ರಂದು ನಡೆಯಿತು.

ಚುನಾವಣಾ ಉಸ್ತುವಾರಿಯಾಗಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸೀತಾರಾಮ ಬಿ.ಎಸ್., ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಪುರುಷೋತ್ತಮ ರಾವ್ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ನೇಮಯ್ಯ ಕುಲಾಲ್, ಕಾರ್ಯದರ್ಶಿ ಅಭಿಜಿತ್ ನಾರಾವಿ, ಮಾಜಿ ಅಧ್ಯಕ್ಷ ಮೋಹನ ಅಂಡಿಂಜೆ, ತಾಲೂಕು ರೈತ ಮೋರ್ಚಾ ಅಧ್ಯಕ್ಷ ವಿಜಯ ಗೌಡ, ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.ಪಂಚಾಯತ್ ಸದಸ್ಯರು ಹಾಜರಿದ್ದರು.

ಪಂಚಾಯತ್ ಸದಸ್ಯ, ವೇಣೂರು ಸಹಕಾರ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಸ್ವಾಗತಿಸಿದರು.

LEAVE A REPLY

Please enter your comment!
Please enter your name here