ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ.ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು ಆಯ್ಕೆ

0

ಲಾಯಿಲ: ಲಾಯಿಲ ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸಭೆಯು ಲಾಯಿಲದ ತರಬೇತಿ ಕೇಂದ್ರದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ.ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಭಜನಾ ಪರಿಷತ್ತಿನ ಸಮನ್ವಯ ಅಧಿಕಾರಿಯಾದ ಸಂತೋಷ್ ಭಾಗವಹಿಸಿ ವಲಯ ಪರಿಷತ್ತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಬಗ್ಗೆ ಮಾಹಿತಿ ನೀಡಿದರು ನಂತರ ವಲಯ ಸಮಿತಿಯನ್ನು ರಚಿಸಲಾಯಿತು.

ಲಾಯಿಲ ವಲಯದ ನೂತನ ಅಧ್ಯಕ್ಷರಾಗಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ.ಚಂದ್ರಶೇಖರ ಸಾಲ್ಯಾನ್, ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಾಲ್ ಕೊಯ್ಯೂರು ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ನಡ, ಕಾರ್ಯದರ್ಶಿಯಾಗಿ ಅಖಿಲೇಶ್ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಚಂದ್ಕೂರು, ಜೊತೆ ಕಾರ್ಯದರ್ಶಿಗಳಾಗಿ ರವಿ ಎಂ. ಕೆ.ಶಾರದ ಭಜನಾ ಮಂಡಳಿ ಪುದ್ದೋಟ್ಟು, ಸೌಮ್ಯ ಶಾರದಾ ಮಹಿಳಾ ಭಜನಾ ಮಂಡಳಿ ಪುದ್ದೋಟ್ಟು, ಪೂರ್ಣಿಮಾ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ಆದೂರು ಪೇರಲ್, ಕೋಶಾಧಿಕಾರಿಯಾಗಿ ದಿನೇಶ್ ಜಾಲ್ನಪು ಶ್ರೀ ಪಂಚದುರ್ಗಾ ಭಜನಾ ಮಂಡಳಿ ಕೊಯ್ಯೂರು ಇವರನ್ನು ಆಯ್ಕೆ ಮಾಡಲಾಯಿತು.

ವಲಯದ ಎಲ್ಲಾ ಭಜನಾ ಮಂಡಳಿಯ ಅಧ್ಯಕ್ಷರನ್ನು ಅಥವಾ ಇನ್ನಿತರ ಪದಾಧಿಕಾರಿಗಳನ್ನು ಅವರ ಒಪ್ಪಿಗೆಯನ್ನು ಪಡೆದು ಸಮಿತಿಗೆ ಸದಸ್ಯರಾಗಿ ಆಯ್ಕೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಯಿತು.ಕಾರ್ಯಕ್ರಮವು ಪೂರ್ಣಿಮಾ ಹೇಮಂತ್ ಗೌಡ ಜಂಕಿನಡ್ಕ ಆದೂರು ಪೇರಲ್ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ವಲಯ ಮೇಲ್ವಿಚಾರಕ ಸುಶಾಂತ್ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here