ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ- ಅಧ್ಯಕ್ಷರಾಗಿ ಲೀಲಾವತಿ ವಸಂತ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪ್ರಭು

0

ಸೋಣಂದೂರು: ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವತಿಯಿಂದ ನಡೆಯುವ 22ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ ಸಭೆಯು‌ ಜು.21ರಂದು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ವಸಂತ್ ಪೂಜಾರಿ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಮುಂಡಾಡಿ, ಗೌರವಾಧ್ಯಕ್ಷರಾಗಿ ಸಂಪತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಬರ್ನ, ಸುಂದರ ಕುಲಾಲ್ ಪಮ್ಮಾಜೆ, ಕೋಶಾಧಿಕಾರಿಯಾಗಿ ಸುಧಾಕರ್ ಸಾಲಿಯಾನ್, ಕಾರ್ಯದರ್ಶಿಯಾಗಿ ಸತೀಶ್ ಆಚಾರ್ಯ, ಗೌರವ ಸಲಹೆಗಾರರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಮೋಹನ್ ನಾಯಕ್ ಪಣಕಜೆ, ಶ್ರೀಧರ್ ಪೂಜಾರಿ ಆಟ್ಲ, ಜನಾರ್ದನ ಶೆಟ್ಟಿ ಸೋಣಂದೂರು, ಯಶೋಧರ ಶೆಟ್ಟಿ ಅರ್ಕಜೆ ಇವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here