ಬೆಳ್ತಂಗಡಿ: ಜೆಸಿಐ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ತರಬೇತಿ ಕಾರ್ಯಕ್ರಮ

0

ಉಜಿರೆ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಜು.14ರಂದು ಉಜಿರೆಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿತು.

ಜೆಸಿಐ ಭಾರತದ ಅಮೃತ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಸರಣಿ ತರಬೇತಿ ಕಾರ್ಯಕ್ರಮವನ್ನು, ಉಜಿರೆ ಗ್ರಾಮ ಪಂಚಾಯತ್ ಉಜಿರೆಯ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು ಕಾರ್ಯಕ್ರಮವನ್ನು ಉದ್ಘಾಟಿಸಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯಕ್ರಮಗಳಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ವಲಯ ತರಬೇತುದಾರ ಘಟಕದ ಉಪಾಧ್ಯಕ್ಷ ಹೇಮಾವತಿ ಕೆ.ಇವರು ತರಬೇತಿಯನ್ನು ಅತ್ಯುತಮವಾಗಿ ನಡೆಸಿಕೊಟ್ಟರು. 40 ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಂಜಿತ್ ಎಚ್. ಡಿ. ವಹಿಸಿ, ಜೀವನದಲ್ಲಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿಯ ಮಹತ್ವ ವನ್ನು ವಿವರಿಸಿ ಸ್ವಾಗತಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಚಂದ್ರಪ್ಪ ಡಿ. ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿಯನ್ನು ಆಯೋಜನೆ ಮಾಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ವೇದಿಕೆ ಆಹ್ವಾನವನ್ನು ಜೊತೆ ಕಾರ್ಯದರ್ಶಿ ಪ್ರಮೋದ್ ಕೆ, ಜೆಸಿ ವಾಣಿಯನ್ನು ಜೆಜೆಸಿ ಅಧ್ಯಕ್ಷ ಸಮನ್ವೀತ್ ಕುಮಾರ್ ವಾಚಿಸಿದರು.ಪೂರ್ವಧ್ಯಕ್ಷ ಪ್ರಸಾದ್ ಬಿ.ಎಸ್ ಭಾಗವಹಿಸಿದರು.ಕಾರ್ಯದರ್ಶಿ ಅನದೀಪ್ ಜೈನ್ ವಂದಿಸಿದರು.

LEAVE A REPLY

Please enter your comment!
Please enter your name here