ಧರ್ಮಸ್ಥಳ ಕನ್ಯಾಡಿ 2 ಸರ್ಕಾರಿ ಪ್ರಾಥಮಿಕ ಶಾಲೆಗೆ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ಪ್ರದಾನ

0

ಚಿಕ್ಕಬಳ್ಳಾಪುರ: ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದ ಆಯ್ದ ಸರ್ಕಾರಿ ಶಾಲೆಗಳಿಗೆ ಕೊಡಲ್ಪಡುವ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಪ್ರಶಸ್ತಿ ಧರ್ಮಸ್ಥಳ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ2ಗೆ ಲಭಿಸಿದೆ.

ರಾಜ್ಯದ ಆಯ್ದ 100 ಶಾಲೆಗಳ ಪೈಕಿ ಕನ್ಯಾಡಿ ಶಾಲೆಗೂ ಲಭಿಸಿದ ಈ ಪ್ರಶಸ್ತಿಯನ್ನು ಶಾಲೆಯ ಹಿರಿಯ ಶಿಕ್ಷಕಿ ಶಾರದ ಜಿರವರು ಇಂದು( 27.07.2024)ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ,ಸತ್ಯಸಾಯಿ ಗ್ರಾಮದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here