ಕುವೆಟ್ಟು: ಸ.ಉ.ಹಿ.ಪ್ರಾ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಶೆಟ್ಟಿರವರಿಗೆ ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

0

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಎಂಟು ವರ್ಷಗಳಿಂದ ಟಿಜಿಟಿ ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಶೆಟ್ಟಿ ಇವರು ಇದೀಗ ಪದೋನ್ನತಿ ಹೊಂದಿ ಬೆಳ್ತಂಗಡಿ ನಡ ಪದವಿಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ವರ್ಗಾವಣೆಗೊಂಡಿದ್ದಾರೆ.

ಅವರಿಗೆ ಶಾಲಾ ವತಿಯಿಂದ ಬಿಳ್ಕೋಡುವ ಸಮಾರಂಭ ಆ.01ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಎಸ್.ಡಿ.ಯಂ.ಸಿ ಸದಸ್ಯರು ಹಾಗೂ ಆಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here